ಕಿಂಗ್ ಕೊಹ್ಲಿ ಜೊತೆ ಇರುವಾಗ ಶೀರ್ಷಿಕೆ ಅಗತ್ಯವಿಲ್ಲ’ ಶಶ್ ಪೋಸ್ಟ್ಗೆ ಶೀರ್ಷಿಕೆ ನೀಡಿದ್ದಾರೆ. ಟೀಂ ಇಂಡಿಯಾದ ಜೆರ್ಸಿಯಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿ ಎಂಬುವುದು ಸಾವಿರಾರು ಅಭಿಮಾನಿಗಳ ಇಚ್ಛೆ. ಇತ್ತೀಚೆಗೆ ಕೊಹ್ಲಿ ಲಂಡನ್ನಲ್ಲಿ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಹುಬ್ಬೇರುವಂತೆ ಮಾಡಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಪರ ಕೊನೆಯ ಬಾರಿಗೆ ಆಡಿದ್ದ ಕೊಹ್ಲಿ, ಟೆಸ್ಟ್ ಕ್ರಿಕೆಟ್ ಮತ್ತು ಟಿ20ಐಗಳಿಂದ ನಿವೃತ್ತಿ ಹೊಂದಿದ್ದರೂ, ಏಕದಿನ ಪಂದ್ಯಗಳಲ್ಲಿ ತಂಡದ ಸಕ್ರಿಯ ಕ್ರಿಕೆಟಿಗರಾಗಿದ್ದಾರೆ. ಭಾರತ ಮೂಲದ ಉದ್ಯಮಿ Shassh ಹಂಚಿಕೊಂಡ […]
Blog
ಮಲಯಾಳಂ ನಿರ್ದೇಶಕನೊಟ್ಟಿಗೆ ಸಲ್ಮಾನ್ ಖಾನ್ ಐತಿಹಾಸಿಕ ಹಿನ್ನೆಲೆಯ ಸಿನಿಮಾ
ಬಾಲಿವುಡ್ ಖಾನ್ಗಳು ಸಿನಿಮಾ ಯಶಸ್ಸಿಗೆ ದಕ್ಷಿಣ ಭಾರತದ ನಿರ್ದೇಶಕರನ್ನು ಆಶ್ರಯಿಸುತ್ತಿದ್ದಾರೆ. ಶಾರುಖ್ ಖಾನ್ ಈಗಾಗಲೇ ಅಟ್ಲಿ ಜೊತೆ ಸಿನಿಮಾ ಮಾಡಿ ಗೆದ್ದಿದ್ದಾರೆ. ಆಮಿರ್ ಖಾನ್ ಮುಂದಿನ ಸಿನಿಮಾ ಅನ್ನು ಲೋಕೇಶ್ ಕನಗರಾಜ್ ನಿರ್ದೇಶಿಸಲಿದ್ದಾರೆ. ಇದೀಗ ಸಲ್ಮಾನ್ ಖಾನ್, ಮಲಯಾಳಂನ ಪ್ರತಿಭಾವಂತ ನಿರ್ದೇಶಕರೊಟ್ಟಿಗೆ ಕೈ ಜೋಡಿಸಲು ಮುಂದಾಗಿದ್ದಾರೆ ಬಾಲಿವುಡ್ (Bollywood) ನಟರು ಯಶಸ್ಸಿಗಾಗಿ ದಕ್ಷಿಣ ಭಾರತ ಸಿನಿಮಾ ನಿರ್ದೇಶಕರ ಬೆನ್ನು ಬಿದ್ದಿದ್ದಾರೆ. ಶಾರುಖ್ ಖಾನ್, ಅಟ್ಲಿ ಜೊತೆ ಕೈಜೋಡಿಸಿ ‘ಜವಾನ್’ ಸಿನಿಮಾ ಮೂಲಕ ಭಾರಿ ದೊಡ್ಡ ಯಶಸ್ಸು ತಮ್ಮದಾಗಿಸಿಕೊಂಡಿದ್ದಾರೆ. […]
ICICI ಬ್ಯಾಂಕ್ ಗ್ರಾಹಕರೇ ಅಲರ್ಟ್ : ಮೆಟ್ರೋ ಮತ್ತು ನಗರ ಪ್ರದೇಶಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ₹50,000ಕ್ಕೆ ಏರಿಕೆ!
ಭಾರತದ ಪ್ರಮುಖ ಖಾಸಗಿ ಬ್ಯಾಂಕ್ಗಳಲ್ಲಿ ಒಂದಾದ ಐಸಿಐಸಿಐ ಬ್ಯಾಂಕ್ ಉಳಿತಾಯ ಖಾತೆಗಳ ಮೇಲಿನ ಮಿನಿಮಮ್ ಬ್ಯಾಲೆನ್ಸ್ ಅನ್ನು ಭಾರೀ ಏರಿಕೆ ಮಾಡಿದೆ. ಮೆಟ್ರೋ ಹಾಗೂ ನಗರದ ಪ್ರದೇಶಗಳಿಗೆ ಬರೋಬ್ಬರಿ 50,000 ರೂಪಾಯಿ ಒಂದೇ ಬಾರಿಗೆ ಹೆಚ್ಚಿಸಿದೆ. ಈ ಹಿಂದೆ ಇದ್ದಿದ್ದು 10,000 ರೂಪಾಯಿ! ಭಾರತದ 2ನೇ ಅತಿ ದೊಡ್ಡ ಖಾಸಗಿ ಬ್ಯಾಂಕ್ ಆಗಿ ಗುರುತಿಸಿಕೊಂಡಿರುವ ಐಸಿಐಸಿಐ ಬ್ಯಾಂಕ್, ಮೆಟ್ರೋ ಮತ್ತು ನಗರ ಪ್ರದೇಶಗಳಲ್ಲಿ ಸೇವಿಂಗ್ಸ್ ಅಕೌಂಟ್ಗೆ ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್ (MAB) ಅನ್ನು 50,000 ರೂ.ಗೆ […]
ಟ್ರಂಪ್ ಹೊಡೆತಕ್ಕೆ ಇನ್ನಷ್ಟು ಕುಸಿಯುತ್ತಾ ಷೇರುಪೇಟೆ? ಮಾರುಕಟ್ಟೆ ಕುಸಿಯಲು ಪ್ರಮುಖ 3 ಕಾರಣಗಳಿವು
: ಭಾರತೀಯ ಷೇರು ಮಾರುಕಟ್ಟೆ ಶುಕ್ರವಾರ ವಹಿವಾಟಿನಲ್ಲಿ ಭಾರೀ ಕುಸಿತ ಕಂಡಿದೆ. ಗುರುವಾರದಂದು ಮಧ್ಯಾಹ್ನದ ನಂತರ ಚೇತರಿಕೆ ಕಂಡಿದ್ದ ಷೇುಪೇಟೆ, ಇಂದು ಶುಕ್ರವಾರದಂದು ದಿನಪೂರ್ತಿ ಕುಸಿತದಲ್ಲೇ ವಹಿವಾಟು ಮುಗಿಸಿತು. ಮುಂದಿನ ದಿನಗಳಲ್ಲಿ ಇನ್ನಷ್ಟು ಕುಸಿಯುವ ನಿರೀಕ್ಷೆ ಇದೆ ಎನ್ನುತ್ತಾರೆ ಮಾರುಕ್ಟೆ ತಜ್ಞರು. ಹಾಗಿದ್ದರೆ ಮಾರುಕಟ್ಟೆ ಕುಸಿತಕ್ಕೆ ಪ್ರಮುಖ ಕಾಣಗಳೇನು ಎಂಬ ಮಾಹಿತಿ ಇಲ್ಲಿದೆ ಡೊನಾಲ್ಡ್ ಟ್ರಂಪ್ ಸುಂಕ ಬೆದರಿಕೆ ಪರಿಣಾಮ ಜಾಗತಿಕ ಮಾರುಕಟ್ಟೆ ಸೇರಿದಂತೆ ದೇಶೀಯ ಮಾರುಕಟ್ಟೆಗಳು ಏಕಕಾಲದಲ್ಲಿ ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ನಿನ್ನೆ ಗುರುವಾರದಂದು ಚೇತರಿಸಿಕೊಂಡಿದ್ದ […]
ಟೆಸ್ಟ್ ಇತಿಹಾಸದಲ್ಲಿ 3ನೇ ಅತಿದೊಡ್ಡ ಗೆಲುವು; 67 ವರ್ಷಗಳ ಹಳೆಯ ದಾಖಲೆ ಮುರಿದ ನ್ಯೂಜಿಲೆಂಡ್
ಬುಲವಾಯೊದಲ್ಲಿ ನಡೆದ ಜಿಂಬಾಬ್ವೆ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭರ್ಜರಿ ಜಯ ಸಾಧಿಸಿತು. ಜಕಾರಿ ಫಾಕ್ಸ್ ಅವರ ಅದ್ಭುತ ಬೌಲಿಂಗ್ನಿಂದ ಜಿಂಬಾಬ್ವೆ ತಂಡ ಕೇವಲ 117 ರನ್ಗಳಿಗೆ ಆಲೌಟ್ ಆಯಿತು. ನ್ಯೂಜಿಲೆಂಡ್ ಇನ್ನಿಂಗ್ಸ್ ಮತ್ತು 359 ರನ್ಗಳ ಅಂತರದಿಂದ ಗೆದ್ದು ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿತು. ಈ ಗೆಲುವು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೂರನೇ ಅತಿದೊಡ್ಡ ಗೆಲುವಾಗಿದೆ.ಬುಲವಾಯೊದ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ಆತಿಥೇಯ ಜಿಂಬಾಬ್ವೆ ಹಾಗೂ ನ್ಯೂಜಿಲೆಂಡ್ (New Zealand vs Zimbabwe) ನಡುವಿನ […]
ಓಲಾ, ಊಬರ್ ಮಾದರಿಯಲ್ಲೇ Ambulance ಬುಕಿಂಗ್ ವ್ಯವಸ್ಥೆ – ಸರ್ಕಾರದಿಂದ ಮಹತ್ವದ ನಿರ್ಧಾರ
ಹೆಚ್ಚಿನ ಹಣ ಪೀಕುತ್ತಿದ್ದ ಆ್ಯಂಬುಲೆನ್ಸ್ ಸಂಸ್ಥೆಗಳಿಗೆ ಸರ್ಕಾರ ಮೂಗುದಾರ ಹಾಕಲು ಮುಂದಾಗಿದೆ. ಕೆಪಿಎಂಇ ಕಾಯ್ದೆ ಅಡಿಯಲ್ಲಿ ಆ್ಯಂಬುಲೆನ್ಸ್ ಸಂಸ್ಥೆಗಳನ್ನು ತರಲು ಕರ್ನಾಟಕ ಸರ್ಕಾರ ಮುಂದಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯದ ಕೆಲವು ಭಾಗಗಳಲ್ಲಿ ಆ್ಯಂಬುಲೆನ್ಸ್ ಹೆಚ್ಚಿನ ದರ ವಿಧಿಸುತ್ತಿವೆ ಎಂಬ ದೂರು ಇದೆ. ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಸಚಿವರು.. ಕೆಪಿಎಂಇ (Karnataka Private Medical Establishment Act) ಅಡಿಯಲ್ಲಿ ಆ್ಯಂಬುಲೆನ್ಸ್ಗಳನ್ನು ಸರ್ಕಾರದಡಿಯಲ್ಲಿ ತರುತ್ತಿದ್ದೇವೆ ಬರುವ ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಲಿದೆ. ಆ್ಯಂಬುಲೆನ್ಸ್ ಹೇಗಿರಬೇಕು, ಮಾನದಂಡ […]
ನಾಳೆ ಬೆಂಗಳೂರಲ್ಲಿ ಪ್ರಧಾನಿ ಮೋದಿ.. ಮೆಟ್ರೋ, 3 ವಂದೇ ಭಾರತ್ ರೈಲು ಸೇರಿ ಏನೆಲ್ಲ ಉದ್ಘಾಟಿಸ್ತಾರೆ..?
ಹಲವು ವರ್ಷಗಳ ಬಳಿಕ ನನಸಾಗಿರೋ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಆರಂಭಕ್ಕೆ ಕೌಂಟ್ ಡೌನ್ ಆರಂಭವಾಗಿದೆ. ನಾಳೆ ಹಳದಿ ಮಾರ್ಗಕ್ಕೆ ದೇಶದ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ. ಹಲವು ವರ್ಷಗಳ ಬಳಿಕ ನನಸಾಗಿರೋ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಆರಂಭಕ್ಕೆ ಕೌಂಟ್ ಡೌನ್ ಆರಂಭವಾಗಿದೆ. ನಾಳೆ ಹಳದಿ ಮಾರ್ಗಕ್ಕೆ ದೇಶದ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ. ಮೋದಿಯಿಂದ ಉದ್ಘಾಟನೆ.. ರಾಜ್ಯರಾಜಧಾನಿಯಲ್ಲಿ ಸಂಚಾರಕ್ಕೆ ಸಿದ್ದಗೊಂಡಿರೋ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲು ಪ್ರಧಾನಿ ಮೋದಿ […]
ಭಾವೈಕ್ಯತೆಗೆ ಸಾಕ್ಷಿಯಾದ ಕೊಪ್ಪಳ: ಮುಸ್ಲಿಂ ಮನೆಯಲ್ಲಿ ವರಮಹಾಲಕ್ಷ್ಮೀ ಪೂಜೆ
ಕೊಪ್ಪಳ: ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ನಜೀರುದ್ದೀನ್ ಮನೆಯಲ್ಲಿ ವರಮಾಹಾಲಕ್ಷ್ಮೀ ಹಬ್ಬ ಆಚರಿಸಲಾಗಿದೆ. ನಜೀರುದ್ದೀನ್ ಮನೆಗೆ ತರಳು ತೋರಣ ಕಟ್ಟಿ ವಿಜೃಂಭಣೆಯಿಂದ ವರಮಹಾಲಕ್ಷ್ಮೀ ಹಬ್ಬ ಆಚರಿಸಲಾಗಿದೆ. ನಜೀರುದ್ದೀನ್ ಬಿಸರಳ್ಳಿ 5-6 ವರ್ಷದ ಹಿಂದ ವರಮಾಹಾಲಕ್ಷ್ಮೀ ಹಬ್ಬದ ದಿನ ಮನೆ ಗೃಹಪ್ರವೇಶ ಮಾಡಿದ್ದರು. ನಜೀರುದ್ದೀನ್ ಬಿಸರಳ್ಳಿ ಕುಟುಂಬ ಅಂದಿನಿಂದ ಪ್ರತಿ ವರ್ಷ ವರಮಾಹಾಲಕ್ಷ್ಮೀ ಹಬ್ಬ ಅಚರಣೆ ಮಾಡುತ್ತಿದ್ದಾರೆ.
ಕರ್ನಾಟಕದ ಐವರು ಮಹಿಳೆಯರಿಗೆ ಇಂಗ್ಲೆಂಡ್ನಲ್ಲಿ ಓದಲು 40 ಲಕ್ಷ ರೂ. ವಿದ್ಯಾರ್ಥಿವೇತನ
ಕರ್ನಾಟಕದ ಐವರು ವಿದ್ಯಾರ್ಥಿನಿಯರು ಚೆವನಿಂಗ್-ಕರ್ನಾಟಕ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಸರ್ಕಾರದಿಂದ ಮಹಿಳೆಯರನ್ನು ಈ ವಿದ್ಯಾರ್ಥಿವೇತನಕ್ಕೆ ಆಯ್ಕೆ ಮಾಡಲಾಗಿದೆ. ಸರ್ಕಾರಿ ಕಾಲೇಜುಗಳಿಂದ ಮಹಿಳಾ ಪದವೀಧರರನ್ನು ಪರಿಗಣಿಸುವ ಈ ವಿದ್ಯಾರ್ಥಿವೇತನವು ಮುಂದಿನ ಮೂರು ವರ್ಷಗಳವರೆಗೆ ಪ್ರತಿ ವರ್ಷ ಮುಂದುವರಿಯಲಿದ್ದು, ಒಟ್ಟು 15 ಮಹಿಳಾ ಪದವೀಧರರಿಗೆ ಪ್ರಯೋಜನವಾಗಲಿದೆ. ಬೆಂಗಳೂರು, ಆಗಸ್ಟ್ 8: ಕರ್ನಾಟಕದ ಐವರು ಮಹಿಳೆಯರು ಚೆವೆನಿಂಗ್ ವಿದ್ಯಾರ್ಥಿವೇತನದ (Chevening-Karnataka scholarships) ಅಡಿಯಲ್ಲಿ ಇಂಗ್ಲೆಂಡ್ಗೆ (UK) ಪ್ರಯಾಣಿಸಲಿದ್ದಾರೆ. ಚೆವೆನಿಂಗ್-ಕರ್ನಾಟಕ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ 5 ಮಹಿಳಾ ವಿದ್ಯಾರ್ಥಿನಿಯರ ಮೊದಲ ಬ್ಯಾಚ್ ಸೆಪ್ಟೆಂಬರ್ನಲ್ಲಿ […]
ಕುವೈತ್: ಬೇಸಿಗೆಯ ತಾಪ ಅಂತಿಮ ಹಂತಕ್ಕೆ- ಆಗಸ್ಟ್ 11 ರಿಂದ ಹೊಸ ಋತು ಆರಂಭ
ಕುವೈತ್ ಸಿಟಿ: ಕುವೈತ್ನಲ್ಲಿ ಬೇಸಿಗೆಯ ಕೊನೆಯ ಹಂತವಾದ ಕೆರಿಬಿಯನ್ ಋತುವು ಪ್ರಾರಂಭವಾಗಿದೆ ಎಂದು ಅಲ್-ಉಜೈರಿ ವೈಜ್ಞಾನಿಕ ಕೇಂದ್ರವು ಘೋಷಿಸಿದೆ. ಈ ಅವಧಿಯು ಆಗಸ್ಟ್ 11 ರಂದು ಪ್ರಾರಂಭವಾಗಲಿದೆ. ಈ ಋತುವು ತೀವ್ರ ಶಾಖದಿಂದ ತಾಪಮಾನವು ಕಡಿಮೆಯಾಗಲು ಪ್ರಾರಂಭಿಸುತ್ತಿದೆ ಎಂಬುದರ ಸಂಕೇತವಾಗಿದೆ. ಕೆರಿಬಿಯನ್ ಋತುವು 13 ದಿನಗಳವರೆಗೆ ಇರಲಿದೆ. ಈ ಅವಧಿಯ ನಂತರ, ಸುಹೈಲ್ ನಕ್ಷತ್ರದ ಗೋಚರಿಸುವಿಕೆಯೊಂದಿಗೆ ಅರೇಬಿಯನ್ ಪರ್ಯಾಯ ದ್ವೀಪದಲ್ಲಿ ಕಠಿಣ ಬೇಸಿಗೆಯು ಅಧಿಕೃತವಾಗಿ ಕೊನೆಗೊಳ್ಳುತ್ತದೆ. ಕುವೈತ್ನಲ್ಲಿ ಮುಂದಿನ ದಿನಗಳಲ್ಲಿ ಬಿಸಿ ಮತ್ತು ತೇವಾಂಶವುಳ್ಳ ವಾತಾವರಣವಿರಲಿದೆ ಎಂದು […]

